ಫಿಲ್ಮ್ ನೋಡೋದು ಅಂದ್ರೆ ನನಗೆ ಸ್ವಲ್ಪ ಅಲರ್ಜಿ. ಎಲ್ಲೋ ಅಪರೂಪಕ್ಕೆ ಒಳ್ಳೇ ಫಿಲ್ಮ್ ಬಂದ್ರೆ ಹೋಗೋಣ ಅನ್ಸತ್ತೆ. ಇತ್ತೀಚೆಗಂತೂ ಯಾವ್ದಾದ್ರು ಒಂದು ಫಿಲ್ಮ್ ಹಿಟ್ ಆದ್ರೆ ಅದೇ ರೀತಿ ಇರುವ (ಕಥೆ, ಸಂಗೀತ, ಸಾಹಿತ್ಯ ಏಲ್ಲಾ ಆಲ್ಮೋಸ್ಟ್ ಕಾಪಿ) ಫಿಲ್ಮ್ ಗಳು ಸಾಲಗಿ ಬರುತ್ತದೆ. ಯಾವ್ದಾದ್ರು ಡಮ್ ಅಂದ್ರೆ ಅಲ್ಲಿಗೆ ಆ ಸೀರೀಸ್ ಸ್ಟಾಪ್ . ಮಿತಿಮೀರಿದ ಕ್ರೌರ್ಯ್ಯ, ಕಾಮ, ಅರ್ಥವಿಲ್ಲದ ಹಾಸ್ಯ, ಮನಸಿಗನಿಸಿದ ಸಾಹಿತ್ಯವೆಲ್ಲಾ ಜಾಸ್ತಿಯಾಗಿದೆ. ಸಂಗೀತವಂತೂ ಕೇಳಲಸಾದ್ಯ. ಅರವತ್ತು-ಏಪ್ಪತ್ತರ ಹಾಡಿನ(ಅದ್ರಲ್ಲೂ ಪಾಪ್ ಮ್ಯೂಸಿಕ್ ಕಾಪಿ ಮಾಡೋದು ಜಾಸ್ತಿ) ಒಂದು ತುಣುಕನ್ನು ತೆಗೆದುಕೊಂಡು ಸ್ವಲ್ಪ ಬದಲಾಯಿಸಿದರೆ ಆಯ್ತು. ಈಗ ಯಾರು ಬೇಕಾದ್ರು ನಿರ್ದೇಶಕರಾಗಬಹುದು. ಒಂದೆರಡು ಬೇರೆ ಭಾಷೆ ಅಥವಾ ಅದೇ ಭಾಷೆಯ ಫಿಲ್ಮ್ ನೋಡಿ ಅಲ್ಲಿಂದ ಇಲ್ಲಿಂದ ತಂದು ಹಾಕಿದ್ರೆ ಆಯ್ತು. ಇವುಗಳ ಮದ್ಯೆ ಅಲ್ಲಿ ಇಲ್ಲಿ ಒಂದೆರಡು ಒಳ್ಳೇ ಫಿಲ್ಮ್ ಗಳು ಬರುತ್ತದೆ.

ನಿರಜ್ ಪಾಂಡೇಯವರ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರ ಇತ್ತೀಚಿನ ದಿನಗಳಲ್ಲಿ ಬಂದ zತ್ತಮ ಚಿತ್ರವೆನ್ನಬಹುದು. ನಾಸಿರುದ್ದೀನ್ ಶಾ ಮತ್ತು ಅನುಪಮ್ ಖೇರ್ ಅವರ ಅಭಿನಯವಿರುವ ಚಿತ್ರದ ಸಾರಾಂಶ ಭಯೋತ್ಪಾದನೆಗೆ ಸಾಮಾನ್ಯ ವ್ಯಕ್ತಿಯ ಸೇಡು ಅಥವಾ ಪ್ರತಿಕ್ರಿಯೆಯನ್ನೊಳಗೊಂಡಿದೆ. ನಿಮಗೆ ಬಿಡುವಾದಾಗ ಒಮ್ಮೆ ನೋಡಿ. ಹಾಂ..ಗೆಳೆಯ ರವೀಂದ್ರ "ಮುಂಬೈ ಮೇರಿ ಜಾನ್" ಫಿಲ್ಮ್ ಬಗ್ಗೆ ಹೇಳಿದ್ದ. ಅದನ್ನು ನೋಡಬೇಕು. ನಿವೇನಾದ್ರು ನೋಡಿದ್ರೆ ಹೇಗಿದೇ ಅಂತ ಹೇಳಿ.